ಯಾ ದೇವೀ ಸರ್ವಭೂತೇಷು ಶಕ್ತಿ ರೂಪೇಣ ಸಂಸ್ಥಿತಾ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ॥
ವಿಶ್ವನಾಥಪುರ ಅಗ್ರಹಾರದಲ್ಲಿ ಏಪ್ರಿಲ್ 29, 2026ನೇ ತಾರೀಕಿನಂದು ಶೃಂಗೇರಿ ಶ್ರೀಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಕುಂಭಾಭಿಷೇಕ ಕಾರ್ಯಕ್ರಮ ನೆಡೆಯಲಿದ್ದು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಒತ್ತಿ.
ನಿರಂತರ ಸೇವೆ ಎಂದರೆ ಪ್ರತಿವರ್ಷವೂ ಆಯ್ಕೆ ಮಾಡಿಕೊಂಡ ದಿನದಲ್ಲಿ ದೇವಾಲಯದಲ್ಲಿ ಪೂಜೆ ನಡೆಸುವ ಶಾಶ್ವತ ಪೂಜಾ ಸೇವೆ ವ್ಯವಸ್ಥೆ. ಈ ದಿನವನ್ನು ಪಂಚಾಂಗದ ಮಾಸ, ತಿಥಿ ಅಥವಾ ಇಂಗ್ಲಿಷ್ ಕ್ಯಾಲೆಂಡರ್ ತಿಂಗಳು ಮತ್ತು ದಿನಾಂಕದ ಮೂಲಕ ಆಯ್ಕೆ ಮಾಡಬಹುದು. ಪೂಜೆ ನಂತರ ಪ್ರಸಾದವನ್ನು ನೋಂದಾಯಿತ ವಿಳಾಸಕ್ಕೆ ಕಳುಹಿಸಲಾಗುತ್ತದೆ.
₹5000
ನೋಂದಾಯಿಸಿಒಂದು ದಿನದ ಸೇವೆ ಎಂದರೆ ಆಯ್ಕೆ ಮಾಡಿಕೊಂಡ ದಿನದಲ್ಲಿ ದೇವಾಲಯದಲ್ಲಿ ಪೂಜೆ ನಡೆಸುವ ಪೂಜಾ ಸೇವೆ ವ್ಯವಸ್ಥೆ. ಈ ದಿನವನ್ನು ಪಂಚಾಂಗದ ಸಂವತ್ಸರ, ಮಾಸ, ತಿಥಿ ಅಥವಾ ಇಂಗ್ಲಿಷ್ ಕ್ಯಾಲೆಂಡರ್ನ ವರ್ಷ, ತಿಂಗಳು, ದಿನಾಂಕದಿಂದ ಆಯ್ಕೆ ಮಾಡಬಹುದು. ಪೂಜೆ ನಂತರ ಪ್ರಸಾದವನ್ನು ನೋಂದಾಯಿತ ವಿಳಾಸಕ್ಕೆ ಕಳುಹಿಸಲಾಗುತ್ತದೆ.
₹500
ನೋಂದಾಯಿಸಿ
ದೇವಸ್ಥಾನದ ಅಭಿವೃದ್ಧಿ ಹಾಗೂ ದೈನಂದಿನ ಕೈಂಕರ್ಯಗಳಿಗೆ ನಿಮ್ಮ ಉದಾರ ದೇಣಿಗೆಯನ್ನು ಸ್ವಾಗತಿಸುತ್ತೇವೆ.
ಸೂಚನೆ: ದೇಣಿಗೆ ಪಾವತಿ ನಂತರ ರಶೀದಿ ಪಡೆಯಲು 8668137325 ವಾಟ್ಸಪ್ಪ್ ನಂಬರಿಗೆ ನಿಮ್ಮ ಪಾವತಿ ಸ್ಕ್ರೀನ್ ಶಾಟ್ ಅನ್ನು ಕಳುಹಿಸಿ.
UPI ID: 9481238409@kbl
ಶ್ರೀ ದುರ್ಗಾಪರಮೇಶ್ವರಿ ಸೇವಾ ಟ್ರಸ್ಟ್ ಒಂದು ಸರ್ಕಾರದಿಂದ ಮಾನ್ಯತೆ ಪಡೆದ ರಿಜಿಸ್ಟರ್ಡ್ ಟ್ರಸ್ಟ್ (Reg ID: KPP-4-00034-2024-25) ಆಗಿದ್ದು, ಇದರ ಮುಖ್ಯ ಉದ್ದೇಶವು ವಿಶ್ವನಾಥಪುರ ಅಗ್ರಹಾರ ದೇವರ ಪೂಜೆಯನ್ನು ಇಂದಿನ ಪೀಳಿಗೆಯಿಂದ ಆರಂಭಿಸಿ ಮುಂದಿನ ಪೀಳಿಗೆಗಳಿಗೆ ನಿರಂತರವಾಗಿ ಮುಂದುವರಿಸುವುದಾಗಿದೆ. ಈ ಟ್ರಸ್ಟ್ ದೇವಾಲಯದ ಪೂಜಾ ಸೇವೆಗಳನ್ನು ಸಮರ್ಪಕವಾಗಿ ನಿರ್ವಹಿಸಲು, ಆಚಾರ-ವಿಚಾರಗಳನ್ನು ಸ್ಥಾಪಿಸಲು ಮತ್ತು ದೇವರ ಸೇವೆಯನ್ನು ಶ್ರದ್ಧೆ ಹಾಗೂ ಸಮರ್ಪಣೆಯೊಂದಿಗೆ ಮುಂದುವರಿಸಲು ಬದ್ಧವಾಗಿದೆ.
ಪವಿತ್ರ ತುಂಗಾ ನದಿಯ ತಟದಲ್ಲಿರುವ ವಿಶ್ವನಾಥಪುರ ಅಗ್ರಹಾರದಲ್ಲಿ ಈಶ್ವರ, ಶ್ರೀದುರ್ಗಾಪರಮೇಶ್ವರಿ, ಶ್ರೀಬೀದಿ ಗಣಪತಿ, ಶ್ರೀಉಧ್ಬವ ಗಣಪತಿ, ಶ್ರೀಆಂಜನೇಯ ಸ್ವಾಮಿ, ಶ್ರೀವೆಂಕಟರಮಣ ಸ್ವಾಮಿ, ಶ್ರೀಗಂಗಾವಿಶ್ವೇಶ್ವರ ದೇವಾಲಯಗಳಿರುತ್ತದೆ. ಅಗ್ರಹಾರವು ಶೃಂಗೇರಿಯಿಂದ 12 ಕಿಲೋಮೀಟರ್ ಮತ್ತು ಕೊಪ್ಪದಿಂದ 16 ಕಿಲೋಮೀಟರ್ ದೂರದಲ್ಲಿದೆ.
ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ತುಂಗಾನದಿಯ ತೀರದಲ್ಲಿ ಅನೇಕ ಅಗ್ರಹಾರಗಳನ್ನು ನಿರ್ಮಿಸಲಾಯಿತು — ಪ್ರತಿಯೊಂದು ಅಗ್ರಹಾರವು ವೇದ ಪಾಠ, ಧರ್ಮಚಟುವಟಿಕೆ, ನ್ಯಾಯದಾನಗಳ ಕೇಂದ್ರವಾಗಿತ್ತು. ವಿಶ್ವನಾಥಪುರವೂ ಅಂಥದೇ ಒಂದು ಪುರಾತನ ಅಗ್ರಹಾರ, ಸುಮಾರು 700–800 ವರ್ಷದ ಹಳೆಯದು ಎಂದು ಹೇಳಲಾಗುತ್ತದೆ. ಈ ಸ್ಥಳದಲ್ಲಿ ಶ್ರೀ ವೆಂಕಟರಮಣಸ್ವಾಮಿ, ಶ್ರೀ ಗಂಗಾವಿಶ್ವೇಶ್ವರ, ಹಾಗೂ ದುರ್ಗಾ ಪರಮೇಶ್ವರಿ ದೇವಾಲಯಗಳು ಇದ್ದವು. ವಿಷ್ಣು ಮತ್ತು ಶಿವನ ದೇಗುಲಗಳು ಒಂದೇ ಅಗ್ರಹಾರದಲ್ಲಿ ಇರುವುದೇ ಈ ಸ್ಥಳದ ವಿಶೇಷತೆ. ವಿಜಯನಗರ ಅರಸರ ಕಾಲದಲ್ಲಿ ಈ ದೇಗುಲಗಳನ್ನು ಪುನಃ ನಿರ್ಮಿಸಲಾಯಿತು. ನಂತರ ಕಾರ್ಕಳದ ರಾಣಿ ಈ ಅಗ್ರಹಾರಕ್ಕೆ ದಾನ ನೀಡಿದ್ದಳು. ಕಾಲಕ್ರಮೇಣ ರಾಜರು, ಸಾಮಂತರು ಇಲ್ಲದಾದ ಬಳಿಕ ಹಾಗೂ ಭೂಸುಧಾರಣೆ ಕಾಯ್ದೆ ಜಾರಿಗೆ ಬಂದ ನಂತರ ಅಗ್ರಹಾರಗಳ ಭೂಮಿ ಖಾಸಗಿ ಹಸ್ತಕ್ಕೆ ಹೋಗಿ, ಅನೇಕ ಅಗ್ರಹಾರಗಳು ಪಾಳುಬಿದ್ದುವು.
ವಿಶ್ವನಾಥಪುರ ಕುಟುಂಬವು ಪೀಳಿಗೆಗಳಿಂದ ದೇಗುಲದ ಪೂಜೆ ಹಾಗೂ ನವರಾತ್ರಿ ಉತ್ಸವವನ್ನು ನಡೆಸುತ್ತ ಬಂದಿದೆ. ನವರಾತ್ರಿ ಸಮಯದಲ್ಲಿ ದುರ್ಗಾಪರಮೇಶ್ವರಿ ದೇವಿಯ ದರ್ಶನ ಮಾತ್ರ ಲಭ್ಯ — ಮದುವೆ ಆಗದವರು ಇಲ್ಲಿ ಹರಕೆ ಹೇಳಿಕೊಂಡರೆ ಮದುವೆ ಆಗುತ್ತದೆ ಎಂಬ ನಂಬಿಕೆ ಇದೆ.
ಹಿಂದೆ ಈ ಅಗ್ರಹಾರದಲ್ಲಿ ವೇದ ಪಾಠಶಾಲೆ, ಗುರುಕುಲ ವ್ಯವಸ್ಥೆ, ಮತ್ತು ಅನ್ನದಾನ ನಡೆಯುತ್ತಿತ್ತು. ಅಗ್ರಹಾರದ ಸುತ್ತಮುತ್ತ ಹಳೆಯ ವೈದಿಕ ಮನೆಗಳ ಅವಶೇಷಗಳು, ಮರದ ಮನೆಗಳು ಹಾಗೂ ಪುರಾತನ ಶಿಲಾ ನಿರ್ಮಾಣಗಳ ಗುರುತುಗಳು ಕಾಣಿಸುತ್ತವೆ. ವಿಶ್ವನಾಥಪುರ ಕುಟುಂಬವು ಈ ಅಗ್ರಹಾರವನ್ನು ಉಳಿಸಿಕೊಳ್ಳಲು ಟ್ರಸ್ಟ್ ಸ್ಥಾಪಿಸಿ ಪುನರುಜ್ಜೀವನದ ಪ್ರಯತ್ನ ಮಾಡುತ್ತಿದ್ದಾರೆ.
ಸಾರಾಂಶವಾಗಿ ವಿಶ್ವನಾಥಪುರ ಅಗ್ರಹಾರವು ವಿಜಯನಗರ ಕಾಲದ ಸಾಂಸ್ಕೃತಿಕ ಪರಂಪರೆಯ ಜೀವಂತ ಸಾಕ್ಷಿ; ಅದರ ದೇವಾಲಯಗಳು, ಪುರಾತನ ಸಂಸ್ಕೃತಿ, ಹಾಗೂ ಕುಟುಂಬದ ನಿಷ್ಠೆ ಇಂದಿಗೂ ಆ ಇತಿಹಾಸದ ಹೊಳಪನ್ನು ಉಳಿಸಿಕೊಂಡಿವೆ.
ವಿಶ್ವನಾಥಪುರ ಅಗ್ರಹಾರ, ಭುವನಕೋಟೆ ಗ್ರಾಮ, ಕೊಪ್ಪ ತಾಲೂಕು, ಚಿಕ್ಕಮಗಳೂರು - 577126
📍 Google Maps📞 9845693703 | ✉️ hallimanesandeep@gmail.com